ಮನೆ ಶಿವಮೊಗ್ಗ ಕಡ್ಲೆ ಹಂಕ್ಲು ಮಾರಿಕಾಂಬಾ ಜಾತ್ರೆ ವೈಭವಯುತ ಸಮಾಪ್ತಿ: ಅದ್ದೂರಿಯಾಗಿ ವನಕ್ಕೆ ತಾಯಿಯನ್ನು ಕರೆದೊಯ್ಯಲಾಯಿತು..!!

ಕಡ್ಲೆ ಹಂಕ್ಲು ಮಾರಿಕಾಂಬಾ ಜಾತ್ರೆ ವೈಭವಯುತ ಸಮಾಪ್ತಿ: ಅದ್ದೂರಿಯಾಗಿ ವನಕ್ಕೆ ತಾಯಿಯನ್ನು ಕರೆದೊಯ್ಯಲಾಯಿತು..!!

26
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

✒️..ಅಮಿತ್ ಆರ್ ಆನಂದಪುರ

ಆನಂದಪುರದಲ್ಲಿ ನಡೆದ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿ ಜಾತ್ರೆ ಒಂಬತ್ತು ದಿನಗಳ ಕಾಲ ಭಕ್ತಿ, ಸಂಭ್ರಮ ಹಾಗೂ ವೈಭವದಿಂದ ಯಶಸ್ವಿಯಾಗಿ ನೆರವೇರಿತು.

ಜಾತ್ರೆಯ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆದಿದ್ದು,ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.

ವಿಶೇಷ ಪೂಜೆಗಳು, ಹೂವಿನ ಅಲಂಕಾರಗಳು ಹಾಗೂ ವಿವಿಧ ಸೇವೆಗಳು ಭಕ್ತರ ಗಮನ ಸೆಳೆದವು.

ಬುಧವಾರ ರಾತ್ರಿ ದೇವಿಯನ್ನು ವನಕ್ಕೆ ಕರೆದೊಯ್ಯುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ವಿವಿಧ ಕಲಾತಂಡಗಳ ಆಕರ್ಷಕ ಪ್ರದರ್ಶನಗಳು ಹಾಗೂ ಡಿಜೆ ಸದ್ದಿನ ನಡುವೆ ಭಕ್ತರು ಉತ್ಸಾಹಭರಿತವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದರು.

ಈ ಮೂಲಕ ವೈಭವಯುತ ಮೆರವಣಿಗೆಯೊಂದಿಗೆ ಒಂಬತ್ತು ದಿನಗಳ ಜಾತ್ರೆ ಭಾವಪೂರ್ಣವಾಗಿ ಸಮಾಪ್ತಿಯಾಯಿತು.

ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷ ವೆಂಕಟೇಶ್ ಹಾಗೂ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ ವಾಟ್ಸಾಪ್ ಗ್ರೂಪ್ ನ ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t