ಮನೆ Blog ಕ್ರೀಡೆ ಬದುಕಿಗೆ ಸ್ಫೂರ್ತಿಯಾಗಿದೆ …ಆನಂದಪುರ ಗ್ರಾ.ಪಂ.ಅಧ್ಯಕ್ಷ ಗುರುರಾಜ್ ***********ಮನಸಿನ ಉಲ್ಲಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದೆ .....

ಕ್ರೀಡೆ ಬದುಕಿಗೆ ಸ್ಫೂರ್ತಿಯಾಗಿದೆ …ಆನಂದಪುರ ಗ್ರಾ.ಪಂ.ಅಧ್ಯಕ್ಷ ಗುರುರಾಜ್ ***********ಮನಸಿನ ಉಲ್ಲಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದೆ .. ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್

190
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (0.39361075, 0.27270812);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38;

ಆನಂದಪುರ: ಕ್ರೀಡೆ ಬದುಕಿಗೆ ಸ್ಪೂರ್ತಿಯಾಗಿದೆ ಎಂದು ಆನಂದಪುರ ಗ್ರಾ.ಪಂ.ಅಧ್ಯಕ್ಷ ಗುರುರಾಜ್ ಹೇಳಿದರು .

ಅವರು ಇಲ್ಲಿನ ಕೆಪಿಎಸ್ ಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾರ್ಥನಾ ರಾಮಕೃಷ್ಣ ಶಾಲಾ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಆನಂದಪುರ ವಲಯ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಜೊತೆಯಲ್ಲಿ ಕ್ರೀಡೆ ಸಾಂಸ್ಕೃತಿಕ ಅಭಿರುಚಿಗಳನ್ನು ಬೆಳೆಸುವ ಕೆಲಸ ಆಗಬೇಕಾಗಿದೆ .ಮಕ್ಕಳ ಪ್ರತಿಭೆಗಳಿಗೆ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಬೆಳೆಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ.

ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕ್ರೀಡೆ ಅತಿ ಹೆಚ್ಚಿನ ಅವಶ್ಯಕತೆ ಇದೆ ಹಾಗಾಗಿ ಇಂತಹ ಪ್ರದೇಶಗಳಲ್ಲಿ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ. ಪ್ರಾಥಮಿಕ ಹಂತದಲ್ಲಿಯೇ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಕೆಲಸ ಆಗಲಿ ಎಂದರು.

ಈ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್ ಮಾತನಾಡಿ ಮಕ್ಕಳ ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಅಭಿರುಚಿಯನ್ನು ಬೆಳೆಸಿದಲ್ಲಿ ಅವರ ಮನಸ್ಸು ಉಲ್ಲಾಸಮಯವಾಗಿ ಕಲಿಯಲು ಸಾಧ್ಯವಾಗುತ್ತದೆ ಮಕ್ಕಳ ಮನಸ್ಸನ್ನು ಕ್ರಿಯಾಶೀಲವಾಗಿಸಲು ಕ್ರೀಡಾ ಚಟುವಟಿಕೆ ಅತಿ ಮುಖ್ಯವಾಗಿದೆ

.ಆ ನಿಟ್ಟಿನಲ್ಲಿ ಮಕ್ಕಳನ್ನು ಬೌದ್ಧಿಕವಾಗಿ ಹಾಗೂ ದೈಹಿಕವಾಗಿ ಬೆಳೆಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಬಾಲ್ಯಾವಸ್ಥೆಯಲ್ಲಿಯೇ ಕ್ರೀಡೆ ಹಾಗೂ ಸಾಂಸ್ಕೃತಿಕ ಮನೋಭಾವನೆಗಳನ್ನು ಬೆಳೆಸುವ ಕೆಲಸ ಆಗಬೇಕು ಇತ್ತೀಚಿನ ದಿನಗಳಲ್ಲಿ ಕ್ರೀಡಾಸಕ್ತಿ ದೂರವಾಗುತ್ತಿರುವುದು ಬೇಸರದ ಸಂಗತಿ ಹಾಗಾಗಿ ಪೋಷಕರು ಈ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ. ಶಾಲಾ ಹಂತದಲ್ಲಿ ಕ್ರೀಡಾ ಮನೋಭಾವ ಮೂಡಿಸುವ ಕೆಲಸ ಆಗಬೇಕಾಗಿದೆ ಇಂತಹ ಕ್ರೀಡೆಗಳ ಆಯೋಜನೆಯಿಂದ ಮಕ್ಕಳಲ್ಲಿ ಸೃಜನಶೀಲತೆ ತುಂಬಲು ಸಾಧ್ಯವಾಗುತ್ತದೆ ಎಂದವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ದೇವರಾಜ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮೂಕಾಂಬ ನವೀನ ರವೀಂದ್ರ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕರಾದ ರಮೇಶ್, ಸಂಘದ ಪ್ರಮುಖರಾದ ರಾಜಶೇಖರ ಶೆಟ್ಟಿ ,ಕೆಪಿಎಸ್ ಶಾಲೆಯ ಉಪ ಪ್ರಾಚಾರ್ಯರಾದ ಈಶ್ವರಪ್ಪ, ಇಂದಿರಾಗಾಂಧಿ ವಸತಿ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಾರ್ವತಿ, ಪ್ರಮುಖ ರಾದ ಕುಮಾರಸ್ವಾಮಿ ದೇವರಾಜ್ ಸಿಆರ್‌ಪಿಗಳಾದ ಭರಮಗೌಡ್ರು, ಚಂದ್ರನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. ಆರಂಭದಲ್ಲಿ ವಿದ್ಯಾರ್ಥಿಗಳ ಪ್ರಾರ್ಥಿಸಿದರು, ವಿಕಾಸ್ ಸ್ವಾಗತಿಸಿ ನಾಗವೇಣಿ ವಂದಿಸಿ ,ಅನುಪಮ ಕಾರ್ಯಕ್ರಮ ನಿರೂಪಿಸಿದರು.