ಚಿತ್ರದುರ್ಗ: ಹಿರಿಯೂರು ಸಮೀಪ ಜವನಗೊಂಡನಹಳ್ಳಿಯ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಂಟೈನರ್ ಹಾಗೂ ನಾನ್-ಎಸಿ ಸ್ವೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ ಹಲವರು ಸಜೀವವಾಗಿ ದಹನಗೊಂಡಿದ್ದಾರೆ.
ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೂರ್ವ ವಲಯ ಐಜಿ ರವಿಕಾಂತೇಗೌಡ ಸ್ಪಷ್ಟನೆ ನೀಡಿದ್ದಾರೆ.
ಸೀಬರ್ಡ್ ಕಂಪನಿಯ ಎಸಿ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು. ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಡಿವೈಡರ್ ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಕಂಟೈನರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎನ್ನಲಾಗಿದ್ದು, ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರುವ ಸಾಧ್ಯತೆ ಇದೆ.ಡಿವೈಡರ್ ದಾಟಿ ಬಂದ ಕಂಟೈನರ್ ಬಸ್ಗೆ ಡಿಕ್ಕಿ ಹೊಡೆದಿದೆ.ಬಸ್ನಲ್ಲಿ ಚಾಲಕ, ನಿರ್ವಾಹಕ ಸೇರಿ 32 ಜನರಿದ್ದರು.
21 ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಕೂಡಲೇ ಹಲವು ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t








