Home ರಾಜ್ಯ ಜಾನುವಾರು ಸಾಕುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!

ಜಾನುವಾರು ಸಾಕುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!

38
0

ಶಿವಮೊಗ್ಗ: ಬಿಸಿಲ ಬೇಗೆಗೆ ಜಾನುವಾರಗಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪಶು ಪಾಲಕರಿಗೆ ಮಹತ್ವದ ಸೂಚನೆ ನೀಡಲಾಗಿದೆ.

ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ತೀವ್ರವಾದ ಶಾಖದ ಹೊಡೆತದಿಂದ (ಹೀಟ್ ವೇವ್) ಜಾನುವಾರುಗಳ ಆರೋಗ್ಯ ಮತ್ತು ಹಾಲಿನ ಉತ್ಪಾದನೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಅವರು ಪಶುಪಾಲಕರಿಗೆ ಕೆಲವು ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಕೋರಿದ್ದಾರೆ.

ಕಡುಬಿಸಿಲಿರುವ ಮಧ್ಯಾಹ್ನದ ಸಮಯದಲ್ಲಿ ಜಾನುವಾರು ಗಳಿಗೆ ಒದ್ದೆಯಾದ ಗೋಣಿ ಚೀಲಗಳನ್ನು ಹೊದಿಸುವುದು ಉತ್ತಮ. ಹಾಗೆಯೇ ಜಾನುವಾರುಗಳ ಕೊಟ್ಟಿಗೆಯ ಮೇಲ್ಪಾವಣಿಗೆ ಸುಣ್ಣದ ಲೇಪನ ಮಾಡುವುದರಿಂದ ಅಥವಾ ತೆಂಗಿನ ಗರಿಗಳನ್ನು ಹೊದಿಸುವುದರಿಂದ ತಾಪಮಾನವನ್ನು ಕಡಿಮೆ ಮಾಡಬಹುದು.

ಜಾನುವಾರುಗಳಿಗೆ ಯಾವಾಗಲೂ ಕುಡಿಯಲು ಸ್ವಚ್ಛ ಮತ್ತು ತಂಪಾದ ನೀರಿನ ವ್ಯವಸ್ಥೆ ಇರಬೇಕು, ಇನ್ನು ಜಾನುವಾರುಗಳ ಮೈಮೇಲೆ ನೀರನ್ನು ಸಿಂಪಡಿಸುವ ವ್ಯವಸ್ಥೆ ಮಾಡಬೇಕು ಹಾಗೂ ಸೊಳ್ಳೆ/ಕೀಟಗಳ ಬಾಧೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.

ಜಾನುವಾರುಗಳಿಗೆ ರಸಮೇವು, ಪೌಷ್ಟಿಕ ಆಹಾರ ಮತ್ತು ಅಗತ್ಯ ಪೋಷಕಾಂಶಗಳ ಪೂರಕಗಳನ್ನು ನೀಡಬೇಕು. ಸಾಧ್ಯವಾದಷ್ಟು ಮಧ್ಯಾಹ್ನದ ವೇಳೆ ಜಾನುವಾರುಗಳನ್ನು ಬಿಸಿಲಿಗೆ ಬಿಡದೆ, ಮರಗಳ ಕೆಳಗೆ ತಂಪಾದ ನೆರಳಿನಲ್ಲಿ ಇರುವಂತೆ ನೋಡಿಕೊಳ್ಳಬೇಕು.

ರೈತರು ಈ ಮೇಲಿನ ಕ್ರಮಗಳನ್ನು ಪಾಲಿಸುವ ಮೂಲಕ ಬೇಸಿಗೆಯ ಅವಧಿಯಲ್ಲಿ ತಮ್ಮ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದು ಎಂದು ಪ್ರಕಟಣೆ ತಿಳಿಸಿದೆ.