ಮನೆ ಶಿವಮೊಗ್ಗ 🐍🚑 ಅಡಿಕೆ ತೋಟದಲ್ಲಿ ಹಾವು ಕಚ್ಚಿ ವೃದ್ಧ ಮಹಿಳೆ ಸಾವು..!!

🐍🚑 ಅಡಿಕೆ ತೋಟದಲ್ಲಿ ಹಾವು ಕಚ್ಚಿ ವೃದ್ಧ ಮಹಿಳೆ ಸಾವು..!!

66
0

ಸಾಗರ: ತಾಲೂಕಿನ ಆನಂದಪುರ ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಬಳ್ಳಿಬೈಲು ಗ್ರಾಮದ ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (71) ಅವರು ಶುಕ್ರವಾರ ಬೆಳಿಗ್ಗೆ ಅಡಿಕೆ ತೋಟದಲ್ಲಿ ಕಳೆ ಸವರುತ್ತಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಲಕ್ಷ್ಮಮ್ಮ ಅವರು ಅಸ್ವಸ್ಥರಾಗಿರುವುದನ್ನು ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಗಮನಿಸಿ, ತಕ್ಷಣ ಓಡಿ ಬಂದು ಅವರನ್ನು ಚಿಕಿತ್ಸೆಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಮ್ಮ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ