
✒️..ಅಮಿತ್ ಆರ್ ಆನಂದಪುರ
ಆನಂದಪುರ: ಆನಂದಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಜೈ ಶೀಲಾ ಅವರಿಗೆ ಠಾಣೆಯಲ್ಲೇ ಸಹೋದ್ಯೋಗಿಗಳ ವತಿಯಿಂದ ಸೀಮಂತ ಕಾರ್ಯಕ್ರಮ ಆತ್ಮೀಯವಾಗಿ ನೆರವೇರಿಸಲಾಯಿತು.

ಸರಳವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು ಜೈ ಶೀಲಾ ಅವರಿಗೆ ಶುಭಾಶಯ ಕೋರಿದರು. ಸಂಪ್ರದಾಯಬದ್ಧವಾಗಿ ಸೀಮಂತ ನೆರವೇರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕಾಗಿ ಹಾರೈಸಿದರು.
ಈ ಸಂದರ್ಭದಲ್ಲಿ ಪಿ.ಎಸ್.ಐ ಪ್ರವೀಣ್ ಸೇರಿದಂತೆ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಇಂತಹ ಕಾರ್ಯಕ್ರಮಗಳು ಠಾಣೆಯೊಳಗಿನ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.















